ನಾಗೇಶ್ ಹೆಗಡೆ ಕನ್ನಡದ ಮುಖ್ಯ ಪತ್ರಕರ್ತರಲ್ಲೊಬ್ಬರು. ಆಕ್ಟಿವಿಸಂ ಗುಣ ಹೊಂದಿದ್ದ ಕನ್ನಡದ ಶ್ರೇಷ್ಠ ಪತ್ರಕರ್ತರು ಕೂಡ. ರಾಜ್ಯದ, ದೇಶದ ಸದ್ಯದ ತುರ್ತನ್ನು ಗ್ರಹಿಸಿಕೊಂಡು ಅವರು ಬರೀತಾರೆ ಮಾತ್ರವಲ್ಲ, ಅಗತ್ಯ ಬಿದ್ದರೆ ಕಣಕ್ಕೆ ಇಳೀತಾರೆ ಕೂಡ. ಅವರಿಗೆ ಹೋಲಿಸಬಹುದಾದರೆ, ನಮ್ಮ ದೇಶದಲ್ಲಿ ಕಾಣಿಸೋ ಇನ್ನೊಬ್ಬ ಪತ್ರಕರ್ತ ಅಂದ್ರೆ ಪಿ.ಸಾಯಿನಾಥ್ ಮಾತ್ರ.